Published on: June 13, 2025

ಆಲಮಟ್ಟಿ ಅಣೆಕಟ್ಟು

ಆಲಮಟ್ಟಿ ಅಣೆಕಟ್ಟು

ಸುದ್ದಿಯಲ್ಲಿ ಏಕಿದೆ?  ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸುವ ಕರ್ನಾಟಕದ ಯೋಜನೆಗೆ ಮಹಾರಾಷ್ಟ್ರದ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.

ಮುಖ್ಯಾಂಶಗಳು

  • ಕಾರಣ: ಆಣೆಕಟ್ಟೆ ಎತ್ತರ ಹೆಚ್ಚಳ ಮಾಡಿದರೆ ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಜಿಲ್ಲೆಗಳು ಪ್ರವಾಹ ಸಮಸ್ಯೆ ಎದುರಿಸುತ್ತವೆ.
  • ಬ್ರಿಜೇಶ್ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಮಂಡಳಿ 2010ರ ಡಿಸೆಂಬರ್ 30ರಂದು ತೀರ್ಪು ನೀಡಿದೆ. ಮತ್ತು ಈ ಆಣೆಕಟ್ಟಿನ ಎತ್ತರವನ್ನು ಮೀಟರನಿಂದ ಮೀಟರಗೆ ಹೆಚ್ಚಿಸಿ, ಯೋಜನೆ ಜಾರಿ ಮಾಡಲಿ ಎಂದು ಪ್ರಮಾಣಪತ್ರವನ್ನು ಸಲ್ಲಿಸಿದೆ
  • ಕರ್ನಾಟಕ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಕೃಷ್ಣಾ ನ್ಯಾಯಮಂಡಳಿ ತೀರ್ಪಿನಂತೆ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519.60 ಮೀಟರ್ ನಿಂದ 524.25 ಮೀಟರ್‌ಗೆ ಹೆಚ್ಚಿಸಬೇಕಿದೆ.
  • ಯೋಜನೆಯ ಲಾಭ: ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಗದಗ ಜಿಲ್ಲೆಗಳ 5.30 ಲಕ್ಷ ಹೆಕ್ಟೇ‌ರ್ ಕ್ಷೇತ್ರಕ್ಕೆ ನೀರಾವರಿ ಒದಗಿಸಲಿದೆ.
  • ಸವಾಲು: ಜಲಾಶಯ ಎತ್ತರ ಹೆಚ್ಚಳದಿಂದ 75,563 ಎಕರೆ ಜಲಾವೃತಗೊಳ್ಳಲಿದೆ. 20 ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ 6,467 ಎಕರೆ, ಕಾಲುವೆಗಳ ಜಾಲ ನಿರ್ಮಾಣಕ್ಕೆ 51,847 ಎಕರೆ ಸೇರಿ ಒಟ್ಟು 1,33,867 ಎಕರೆ ಸ್ವಾಧೀನಪಡಿಸಿಕೊಳ್ಳಬೇಕಿದೆ.

ಮಹಾರಾಷ್ಟ್ರ ಸರ್ಕಾರದ ನಂದಕುಮಾರ ವಡನೆರೆ ನೇತೃತ್ವದ ಸಮಿತಿ

ಪ್ರವಾಹ ಅಧ್ಯಯನಕ್ಕಾಗಿ ಮಹಾರಾಷ್ಟ್ರ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ನಂದಕುಮಾರ ವಡನೆರೆ ನೇತೃತ್ವದಲ್ಲಿ 2019ರಲ್ಲಿ ಸಮಿತಿ ರಚಿಸಲಾಗಿತ್ತು. ಮಹಾ ಪ್ರವಾಹ ಉಂಟಾಗಲು ಕರ್ನಾಟಕದ ಜಲಾಶಯಗಳು ಕಾರಣವಲ್ಲ. ನದಿಪಾತ್ರದಲ್ಲಿನ ಅತಿಕ್ರಮಣ, ಕಾನೂನು ಬಾಹಿರ ಕಟ್ಟಡಗಳ ನಿರ್ಮಾಣಗಳೇ ಮುಖ್ಯ ಕಾರಣ. ಜತೆಗೆ ಮಳೆಗಾಲದಲ್ಲಿ ಅತಿ ಮಳೆಯಾದ ತಕ್ಷಣವೇ ಹಳ್ಳ, ಕೊಳ್ಳ, ನದಿಗಳು ಏಕಾಏಕಿ ಉಕ್ಕಿ ಹರಿಯುವುದರಿಂದ ಪ್ರವಾಹ ಉಂಟಾಗುತ್ತದೆ’ ಎಂದು ನೀರಾವರಿ ತಜ್ಞ ನಂದಕುಮಾರ ವಡನೆರೆ ಸಮಿತಿಯು 2020ರಲ್ಲೇ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಆಲಮಟ್ಟಿ ಅಣೆಕಟ್ಟಿನ ಬಗ್ಗೆ

  • ಇದನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಅಣೆಕಟ್ಟು ಎಂದೂ ಕರೆಯುತ್ತಾರೆ,
  • ಇದು ಕೃಷ್ಣಾ ನದಿಯ ಜಲವಿದ್ಯುತ್ ಯೋಜನೆಯಾಗಿದೆ
  • ಸ್ಥಳ: ಆಲಮಟ್ಟಿ, ನಿಡಗುಂಡಿ, ಬಿಜಾಪುರ ಜಿಲ್ಲೆ, ಕರ್ನಾಟಕ
  • ಆಪರೇಟರ್: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್
  • ವಾರ್ಷಿಕ ವಿದ್ಯುತ್ ಉತ್ಪಾದನೆಯ ಗುರಿ: 560 MU
  • ಅಡಿಪಾಯ: ದಿವಂಗತ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(ಮೇ 22, 1964 ರಲ್ಲಿ)
  • ಆರ್. ಎಸ್. ಬಚಾವತ್ ನ್ಯಾಯಮಂಡಳಿ ನೇತೃತ್ವದ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿಯಿಂದ ಕರ್ನಾಟಕ ರಾಜ್ಯಕ್ಕೆ ನೀರು ಹಂಚಿಕೆ ಮಾಡಲಾಗಿದೆ.
  • ವಿವಾದ: ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಮಧ್ಯೆ