Published on: June 13, 2025

ಕೋಮು ಹಿಂಸೆ ನಿಗ್ರಹ ಕಾರ್ಯಪಡೆ

ಕೋಮು ಹಿಂಸೆ ನಿಗ್ರಹ ಕಾರ್ಯಪಡೆ

ಸುದ್ದಿಯಲ್ಲಿ ಏಕಿದೆ? ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕೋಮು ಗಲಭೆಗಳನ್ನು ತಡೆಯಲು ರಾಜ್ಯ ಸರ್ಕಾರವು ಕೋಮು ಹಿಂಸೆ ನಿಗ್ರಹ ಕಾರ್ಯಪಡೆಯನ್ನು ರಚಿಸಿದೆ.

ಮುಖ್ಯಾಂಶಗಳು

  • ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇಂತಹ ಕಾರ್ಯಪಡೆಯನ್ನು ರಚಿಸಿದೆ
  • ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಘಟಕದ ಮುಖ್ಯಸ್ಥರಾಗಿದ್ದು, ರಾಜ್ಯ ನಕ್ಸಲ್‌ ನಿಗ್ರಹ ಪಡೆಯಲ್ಲಿ (ಎಎನ್‌ಎಫ್‌) ಕಾರ್ಯ ನಿರ್ವಹಿಸುತ್ತಿದ್ದ ಮೂವರು ಇನ್‌ಸ್ಪೆಕ್ಟರ್‌ಗಳನ್ನು ಒಳಗೊಂಡಂತೆ 248 ಪೊಲೀಸ್‌ ಸಿಬ್ಬಂದಿಯನ್ನು ಈ ವಿಶೇಷ ಕಾರ್ಯಪಡೆಗೆ ನಿಯೋಜಿಸಲಾಗಿದೆ.
  • ಈ ಪಡೆಯು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ.
  • ತರಬೇತಿ: ಉಡುಪಿ ಜಿಲ್ಲೆಯ ಸಿಬ್ಬಂದಿಗೆ ಕಾರ್ಕಳದಲ್ಲಿ ತರಬೇತಿ ನೀಡಲಾಗುವುದು.

ಉದ್ದೇಶ

ಕರಾವಳಿ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೋಮುಗಲಭೆ ಪ್ರಚೋದಿಸುವ ಪ್ರತೀಕಾರದ ಸರಣಿ ಹತ್ಯೆಗಳು ನಡೆಯುತ್ತಿವೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುವುದರ ಜೊತೆಗೆ ಕಾನೂನು ಸುವ್ಯವಸ್ಥೆಗೂ ಧಕ್ಕೆಯಾಗುತ್ತಿದೆ. ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಹೊಸದಾಗಿ ಕೋಮುವಾದಿ ಚಟುವಟಿಕೆಗಳ ನಿಯಂತ್ರಣಕ್ಕಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗುತ್ತದೆ.