Published on: June 13, 2025

ಚುಟುಕು ಸಮಾಚಾರ : 8th ಜೂನ್ 2025

ಚುಟುಕು ಸಮಾಚಾರ : 8th ಜೂನ್ 2025

ನಕ್ಸಲ್ ನಿಗ್ರಹ ಪಡೆ: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕ್ಸಲ್ ನೋಗ್ರಹ ಪಡೆಯನ್ನು ಇನ್ನು ಮೂರು ವರ್ಷ ಮುಂದುವರೆಸಲಾಗುವುಡ್ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿನ ಬಹುತೇಕ ನಕ್ಸಲರು ಸರ್ಕಾರಕ್ಕೆ ಶರಣಾದ ಕಾರಣ ನಕ್ಸಲ್ ನಿಗ್ರಹ ಪಡೆಯನ್ನು ರದ್ದುಪಡಿಸಲಾಗುವುದು ಎಂದು ಮುಖ್ಯಮಂತ್ರಿ ಅವರು 2025 ರ ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಛತ್ತೀಸಗಡ, ಮಹಾರಾಷ್ಟ್ರದ ಕಡೆಯಿಂದ ಕೆಲ ನಕ್ಸಲರು ಕರ್ನಾಟಕ ಮತ್ತು ಕೇರಳದ ಕಡೆಗೆ ಬರುತ್ತಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಹೀಗಾಗಿ ನಕ್ಸಲ್ ನಿಗ್ರಹ ಪಡೆಯ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಸಲ್ಲಿಕೆಯಾದ ಕಾರಣ    ಪಡೆಯನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ’.

ಪಾರ್ಶ್ವನಾಥ ಉಬ್ಬುಶಿಲ್ಪ ಮತ್ತು ಕುಳಿಮಂಜ ಶಾಸನ: ‘ನಾಲ್ಕನೇ ಜೈನಗುಹೆಯ ಕೆಳಗಿನ ಬೆಟ್ಟದ ಭಿತ್ತಿಯ ಮೇಲೆ ಈಚೆಗೆ ಮೂರು ಪಾರ್ಶ್ವನಾಥ ಉಬ್ಬುಶಿಲ್ಪ ಮತ್ತು ಒಂದು ಸಾಲಿನಲ್ಲಿ ‘ಕುಳಿಮಂಜ’ ಎಂದು ಬರೆದ ಶಾಸನ ಸಿಕ್ಕಿದೆ. ‘ಕುಳಿಮಂಜ’ ಎನ್ನುವ ಶಾಸನ ಉತ್ತರದ ಗುಡ್ಡದಲ್ಲೂ ಪತ್ತೆಯಾಗಿದೆ. ಅದು ಒಬ್ಬ ಶಿಲ್ಪಿಯ ಹೆಸರು ಇರಬಹುದು’”. ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಚಾಲುಕ್ಯರು 6ನೇ ಶತಮಾನದಲ್ಲಿ ನಿರ್ಮಿಸಿದ ನಾಲ್ಕನೇ ಜೈನ ಗುಹಾಲಯದ ಕೆಳಗಿನ ಬೆಟ್ಟದಲ್ಲಿ ಅನ್ವೇಷಣೆ ನಡೆದಿದೆ. ‘ಚಾಲುಕ್ಯ ಶಿಲ್ಪಿಗಳು ಬೆಟ್ಟದ ನಾಲ್ಕನೇ ಜೈನ ಬಸದಿಯಲ್ಲಿ ಮೂರ್ತಿಗಳನ್ನು ರೂಪಿಸುವ ಮುನ್ನ ಉಬ್ಬು ಮೂರ್ತಿಗಳನ್ನು ತಯಾರಿಸಲು ಪ್ರಯತ್ನಿಸಿರಬಹುದು.

ಕೋಮು ಹಿಂಸೆ ನಿಗ್ರಹ ಕಾರ್ಯಪಡೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕೋಮು ಗಲಭೆಗಳನ್ನು ತಡೆಯಲು ರಾಜ್ಯ ಸರ್ಕಾರವು ಕೋಮು ಹಿಂಸೆ ನಿಗ್ರಹ ಕಾರ್ಯಪಡೆಯನ್ನು ರಚಿಸಿದೆ.  ದೇಶದಲ್ಲಿ ಮೊದಲ ಬಾರಿಗೆ  ಕರ್ನಾಟಕ ರಾಜ್ಯ ಸರ್ಕಾರ ಇಂತಹ ಕಾರ್ಯಪಡೆಯನ್ನು ರಚಿಸಿದೆ. ಈ ಪಡೆಯು ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ.  ತರಬೇತಿ: ಉಡುಪಿ ಜಿಲ್ಲೆಯ ಸಿಬ್ಬಂದಿಗೆ ಕಾರ್ಕಳದಲ್ಲಿ ತರಬೇತಿ ನೀಡಲಾಗುವುದು.

 ಸುಸ್ಥಿರ ಜಲಾನಯನ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ: ಜೂನ್ 3ರಿಂದ 5ರವರೆಗೆ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ‘ಭೂ ಸಂಪನ್ಮೂಲ ಸಮೀಕ್ಷೆ ಆಧಾರಿತ ಸುಸ್ಥಿರ ಜಲಾನಯನ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ’ ಆಯೋಜಿಸಲಾಗಿತ್ತು. ಸಹಯೋಗ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಲಾನಯನ ನಿರ್ವಹಣೆಯ ಉತ್ಕೃಷ್ಟ ಕೇಂದ್ರ, ಜಲಾನಯನ ಅಭಿವೃದ್ಧಿ ಇಲಾಖೆ, ಭೂ ಸಂಪನ್ಮೂಲ ಅಭಿವೃದ್ಧಿ ಇಲಾಖೆ

ಆಲಮಟ್ಟಿ ಅಣೆಕಟ್ಟೆ: ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್ಗೆ ಹೆಚ್ಚಿಸುವ ಕರ್ನಾಟಕದ ಯೋಜನೆಗೆ ಮಹಾರಾಷ್ಟ್ರದ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಕಾರಣ: ಆಣೆಕಟ್ಟೆ ಎತ್ತರ ಹೆಚ್ಚಳ ಮಾಡಿದರೆ ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಜಿಲ್ಲೆಗಳು ಪ್ರವಾಹ ಸಮಸ್ಯೆ ಎದುರಿಸುತ್ತವೆ. ಕರ್ನಾಟಕ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಕೃಷ್ಣಾ ನ್ಯಾಯಮಂಡಳಿ ತೀರ್ಪಿನಂತೆ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519.60 ಮೀಟರ್ ನಿಂದ 524.25  ಮೀಟರ್ಗೆ ಹೆಚ್ಚಿಸಬೇಕಿದೆ.

ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ): ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ಮೂಲಕ ಮೇ ತಿಂಗಳಲ್ಲಿ ದಾಖಲೆಯ ಗರಿಷ್ಠ ₹25.14 ಲಕ್ಷ ಕೋಟಿಗಳಷ್ಟು ವಹಿವಾಟು ನಡೆದಿದೆ ಎಂದು ರಾಷ್ಟ್ರೀಯ ಪಾವತಿ ನಿಗಮ (ಎನ್ಪಿಸಿಐ) ತಿಳಿಸಿದೆ. ಇದನ್ನು 2016 ರಲ್ಲಿ NPCI ಅಭಿವೃದ್ಧಿಪಡಿಸಿತು ಮತ್ತು ತಕ್ಷಣದ ಪಾವತಿ ಸೇವೆ (IMPS) ಮೂಲಸೌಕರ್ಯವನ್ನು ಆಧರಿಸಿ ನಿರ್ಮಿಸಲಾಗಿದೆ.