Published on: June 4, 2025

ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024

ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024

ಸುದ್ದಿಯಲ್ಲಿ ಏಕಿದೆ? ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಮತ್ತು ಶೀಘ್ರವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯಕ್ಕೆ ಅನುಕೂಲವಾಗುವಂತೆ ಉಪಬಂಧ ಕಲ್ಪಿಸಲು ಸಿವಿಲ್‌ ಪ್ರಕ್ರಿಯಾ ಸಂಹಿತೆ 1908ಕ್ಕೆ ತಿದ್ದುಪಡಿ ಮಾಡುವ “ಸಿವಿಲ್‌ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024” ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕ ರಾಜ್ಯವು ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಕಾನೂನನ್ನು ಜಾರಿಗೆ ತಂದ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಇತಿಹಾಸ ಸೃಷ್ಟಿಸಿದೆ.
  • ಇನ್ನು ಮುಂದೆ 2 ತಿಂಗಳಲ್ಲೇ ಸಿವಿಲ್‌ ವ್ಯಾಜ್ಯಗಳು ಇತ್ಯರ್ಥ ತಿದ್ದುಪಡಿ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಅನುಮೋದಿಸಲಾಗಿತ್ತು.
  • ರಾಜ್ಯಪಾಲರು ಇದನ್ನು ಸಂವಿಧಾನದ ಅನುಚ್ಛೇದ 200 ಮತ್ತು 254ರ ಅಡಿ ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಾಯ್ದಿರಿಸಿದ್ದರು.
  • ಮಧ್ಯಸ್ಥಿಕೆದಾರರು ಸಿವಿಲ್‌ ದಾವೆಗಳ ರಾಜಿ- ಸಂಧಾನಕ್ಕೆ ಪ್ರಯತ್ನಿಸಲು ಅವಕಾಶ ಇದ್ದು, 2 ತಿಂಗಳು ಗಳಲ್ಲಿ ರಾಜಿ-ಸಂಧಾನ ಮಾಡಬಹುದು. ಅದು ಮುರಿದು ಬಿದ್ದರೆ ತತ್‌ಕ್ಷಣವೇ ನ್ಯಾಯಾಲಯವು ವಿಚಾರಣೆಗೆ ಕೈಗೆತ್ತಿಕೊಳ್ಳಬಹುದು.

ಉದ್ದೇಶ

1908 ರ ಸಿವಿಲ್ ಪ್ರಕ್ರಿಯಾ ಸಂಹಿತೆಗೆ ಈ ಪ್ರಮುಖ ತಿದ್ದುಪಡಿಯು ಭಾರತದಲ್ಲಿ ವಿಳಂಬವಾದ ನ್ಯಾಯದ ದೀರ್ಘಕಾಲದ ಸಮಸ್ಯೆಯನ್ನು ಸರಿಪಡಿಸುವ ಗುರಿಯನ್ನು ಹೊಂದಿದೆ. ಕರ್ನಾಟಕವೊಂದರಲ್ಲಿಯೇ 10 ಲಕ್ಷಕ್ಕೂ ಹೆಚ್ಚು ಸಿವಿಲ್ ಪ್ರಕರಣಗಳು ಬಾಕಿ ಉಳಿದಿವೆ – ಕೆಲವು ಎರಡು ದಶಕಗಳಿಗಿಂತಲೂ ಹಳೆಯವು – ಈ ಕಾನೂನು ನ್ಯಾಯಾಂಗ ಪ್ರಕ್ರಿಯೆಯನ್ನು ಸುಗಮಗೊಳಿಸುವತ್ತ ಒಂದು ನಿರ್ಣಾಯಕ ಹೆಜ್ಜೆಯಾಗಿದೆ.

ಸಿವಿಲ್ ವ್ಯಾಜ್ಯ

ವ್ಯಕ್ತಿಗಳು ಅಥವಾ ಘಟಕಗಳು ಅಪರಾಧವಲ್ಲದ ಕಾನೂನು ವಿವಾದಗಳಿಗೆ ಪರಿಹಾರವನ್ನು ಹುಡುಕುವ ಪ್ರಕ್ರಿಯೆಯಾಗಿದೆ. ಉದಾಹರಣೆ: ಕರಾರು ವಿವಾದಗಳು, ಆಸ್ತಿ ವಿವಾದಗಳು, ಮಾನನಷ್ಟ ಮೊಕದ್ದಮೆಗಳು